ಡೆಂಗ್ಯೂ ಮತ್ತು ಕಾಲರಾ ಜಾಗೃತಿ ಕಾರ್ಯಕ್ರಮ
ಎಸ್.ಎಂ.ಎಸ್. ಕಾಲೇಜು, ಬ್ರಹ್ಮಾವರದ ಎನ್.ಎಸ್.ಎಸ್. ಘಟಕದ ವತಿಯಿಂದ “ಡೆಂಗ್ಯೂ ಮತ್ತು ಕಾಲರಾ ಜಾಗೃತಿ” ಕುರಿತ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಈ ಕಾರ್ಯಕ್ರಮದ ಅಂಗವಾಗಿ ಎನ್.ಎಸ್.ಎಸ್. ಸ್ವಯಂಸೇವಕರು ವಾರಂಬಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಂದಿರಾ ನಗರ ಪ್ರದೇಶದ ಮನೆ ಮನೆಗೆ ಭೇಟಿ ನೀಡಿ, ಡೆಂಗ್ಯೂ ಮತ್ತು ಕಾಲರಾ ರೋಗಗಳ ಲಕ್ಷಣಗಳು, ಕಾರಣಗಳು ಹಾಗೂ ತಡೆಗಟ್ಟುವ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು. ಅವರು ಶುದ್ಧ ಕುಡಿಯುವ ನೀರಿನ ಬಳಕೆ, ಪರಿಸರದ ಸ್ವಚ್ಛತೆ, ನಿಂತ ನೀರಿನ ನಿವಾರಣೆ, ಮತ್ತು ಸಮಯೋಚಿತ ವೈದ್ಯಕೀಯ ಚಿಕಿತ್ಸೆ ಅಗತ್ಯತೆಯ ಬಗ್ಗೆ ವಿವರಿಸಿದರು.ಈ ಕಾರ್ಯಕ್ರಮಕ್ಕೆ ಎನ್.ಎಸ್.ಎಸ್. ಯೋಜನಾಧಿಕಾರಿ ಶ್ರೀ ಪ್ರಸನ್ನ ಶೆಟ್ಟಿ ಅವರು ನೇತೃತ್ವ ವಹಿಸಿದ್ದರು. ಇವರಿಗೆ ಹಿರಿಯ ಎನ್.ಎಸ್.ಎಸ್. ಸ್ವಯಂಸೇವಕರು ಸಹಕರಿಸಿದರು.

No comments:
Post a Comment